*ಯಥಾವತ್ತಾಗಿ ನಕಲು ಮಾಡು
ಏನಿದೆ ಇವಂದು? ಎಲ್ಲ ಅವನದ್ದೇ ಭಟ್ಟಿ ಇಳಿಸಿದ್ದಾನೆ ಎಂದು ಹೇಳುವುದನ್ನು ಕೇಳಿದ್ದೇವೆ. ಅಂದರೆ ಎಲ್ಲವನ್ನೂ ಯಥಾವತ್ತಾಗಿ ಸ್ವೀಕರಿಸಿದ್ದಾನೆ ಎಂಬ ಅರ್ಥ ಇಲ್ಲಿದೆ. ಬೇರೆಯವರದ್ದನ್ನು ಕದ್ದು ತಮ್ಮದೆಂದು ಹೇಳಿಕೊಳ್ಳುವಲ್ಲೂ ಈ ಭಟ್ಟಿ ಇಳಿಸುವಿಕೆ ಬಳಕೆಯಾಗುತ್ತದೆ. ಇದು ಚೌರ್ಯ.
ಭಟ್ಟಿ ಇಳಿಸುವುದರ ಮೂಲ ಅರ್ಥ ಶುದ್ಧೀಕರಿಸು ಎನ್ನುವುದು. ಶುದ್ಧ ನೀರನ್ನು ತಯಾರಿಸುವ ವಿಧಾನಗಳಲ್ಲಿ ಭಟ್ಟಿ ಇಳಿಸುವುದೂ ಒಂದು. ನೀರನ್ನು ಕಾಯಿಸಿ ಅದರ ಹಬೆಯನ್ನು ಬೇರೊಂದು ಪಾತ್ರೆಯಲ್ಲಿ ಸಂಗ್ರಹಿಸಿ ಅದನ್ನು ತಂಪುಗೊಳಿಸಿದಾಗ ಶುದ್ಧ ನೀರು ದೊರೆಯುತ್ತದೆ. ಇದು ವಿಜ್ಞಾನ.
ಭಟ್ಟಿ ಇಳಿಸುವಿಕೆ ಎಂದಾಗ ನೆನಪಾಗುವುದು ಕಳ್ಳಭಟ್ಟಿ ತಯಾರಿಕೆ. ಇಲ್ಲಿಯೂ ಹಣ್ಣಿನ ಕೊಳೆಯನ್ನು ಭಟ್ಟಿ ಇಳಿಸಿಯೇ ಶುದ್ಧ ಸಾರಾಯಿ ತಯಾರಿಸುತ್ತಾರೆ. ಇಲ್ಲಿಯೂ ವಿಜ್ಞಾನವೇ ಇದೆ. ಆದರೆ ರೂಢಿಯಲ್ಲಿರುವ ಭಟ್ಟಿ ಇಳಿಸುವುದು ಎಂದರೆ ಚೌರ್ಯ.
ನಾನು ವಾಸುದೇವ ಶೆಟ್ಟಿ. ನನ್ನೂರು ಹೊನ್ನಾವರ ತಾಲೂಕಿನ ಜಲವಳ್ಳಿ. 5ನೆ ತರಗತಿಯ ವರೆಗೆ ನಮ್ಮೂರಿನ ಶಾಲೆಯಲ್ಲಿಯೇ ಓದಿದೆ. ನಂತರ ಹೊನ್ನಾವರದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ 10ನೆ ತರಗತಿಯ ವರೆಗೆ. ಹೊನ್ನಾವರದ ಎಸ್ಡಿಎಂ ಕಾಲೇಜಿನಲ್ಲಿ ಪದವಿ ಶಿಕ್ಷಣ. ಧಾರವಾಡದ ಕವಿವಿಯಲ್ಲಿ ಕನ್ನಡದಲ್ಲಿ ಎಂ.ಎ. ನಂತರ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ. ಕಾರವಾರದ ಬಾಡದ ಶಿವಾಜಿ ಕಾಲೇಜಿನಲ್ಲಿ ಮೂರು ವರ್ಷ ಅರೆಕಾಲಿಕ ಉಪನ್ಯಾಸಕ. ಹಾಗೆಯೇ ಕಾರವಾರದ ಸರ್ಕಾರಿ ಕಲಾ ವಿಜ್ಞಾನ ಕಾಲೇಜಿನಲ್ಲೂ ಒಂದು ವರ್ಷ ಉಪನ್ಯಾಸಕನಾಗಿ ಸೇವೆ. ಬಳಿಕ ಎರಡು ವರ್ಷ ಊರಿನಲ್ಲಿ ವ್ಯವಸಾಯ. ನಡುವೆ 1989ರಲ್ಲಿ ಸರೋಜಿನಿಯೊಂದಿಗೆ ಮದುವೆ. 1990ರಲ್ಲಿ ನನ್ನ ಮಗನ ಜನನ. ಜೊತೆಗೆ ನಾನು ಪತ್ರಿಕಾರಂಗವನ್ನು ನನ್ನ ವೃತ್ತಿಯನ್ನಾಗಿ ಸ್ವೀಕರಿಸಿದೆ. ಬೆಳಗಾವಿಯಲ್ಲಿ ರಾಘವೇಂದ್ರ ಜೋಶಿಯವರ ನಾಡೋಜ, ಹುಬ್ಬಳ್ಳಿಯ ಸಂಯುಕ್ತ ಕರ್ನಾಟಕ, ಬೆಳಗಾವಿಯ ಕನ್ನಡಮ್ಮ, ಸಮತೋಲ ಸಂಜೆ ಪತ್ರಿಕೆ ಹೀಗೆ ಆರು ವರ್ಷ ತಳ ಮಟ್ಟದ ಪತ್ರಿಕೋದ್ಯಮದ ಜ್ಞಾನದೊಂದಿಗೆ 1997ರ ಫೆಬ್ರವರಿ 18ರಂದು ಬೆಳಗಾವಿಯ ಕನ್ನಡಪ್ರಭದಲ್ಲಿ ಉಪಸಂಪಾದಕನಾಗಿ ಸೇರಿದೆ. ಹಂತಹಂತವಾಗಿ ವೃತ್ತಿಯಲ್ಲಿ ಅನುಭವ ಪಡೆಯುತ್ತ ಪದೋನ್ನತಿಯನ್ನು ಪಡೆಯುತ್ತ ಹಿರಿಯ ಸುದ್ದಿ ಸಂಪಾದಕ, ಸಂಪಾದಕ, ಮುದ್ರಕ ಮತ್ತು ಪ್ರಕಾಶಕನಾಗಿ 2020ರ ಡಿಸೆಂಬರ್ ಕೊನೆಯ ದಿನ ವೃತ್ತಿಯಿಂದ ನಿವೃತ್ತನಾದೆ. ಪತ್ನಿ, ಮಗ, ಸೊಸೆ, ಮಗಳು, ಅಳಿಯ ಮತ್ತು ನಾನು. ಇದೇ ನನ್ನ ಖಾಸಗಿ ಪ್ರಪಂಚ. ಈ ಜಾಲತಾಣದಲ್ಲಿ ನಾನು ಬರೆದ ಎಲ್ಲ ರೀತಿಯ ಲೇಖನಗಳನ್ನು ಒಂದೊಂದಾಗಿ ಸೇರಿಸುತ್ತ ಹೋಗುತ್ತೇನೆ. ಓದಿ, ನಿಮಗೇನಾದರೂ ಅನ್ನಿಸಿದರೆ ಅದನ್ನು ದಾಖಲಿಸಿ.