ಕನಕನ ಮಾಯೆ

ಕನಕದಾಸರು ನಮಗೆ ಮುಖ್ಯವಾಗುವುದು ಎರಡು ಕಾರಣಗಳಿಗಾಗಿ. ಒಂದು, ಅವರು ರಚಿಸಿದ ಕೀರ್ತನಗಳು ಮತ್ತು ಇತರ ಸಾಹಿತ್ಯ ಕೃತಿಗಳಿಗಳಿಗಾಗಿ. ಇದು ಸಾಹಿತ್ಯದ ಭಾಗ. ಇನ್ನೊಂದು, ಸಮಕಾಲೀನ ಸಮಾಜದಲ್ಲಿ ಅವರು ಬಹುದೊಡ್ಡ ಸಮುದಾಯದ ನಾಯಕನೆಂದು ಪರಿಗಣಿಸಲ್ಪಟ್ಟು ಆ ಜನಾಂಗದ ಅಸ್ಮಿತೆಗೆ ಅವರು ನೆಲೆಯನ್ನು ಒದಗಿಸಿದ್ದಕ್ಕಾಗಿ. ಇದು ಸಾಮಾಜಿಕ ಭಾಗ. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಕನಕ ಅಧ್ಯಯನ ಪೀಠ ಸ್ಥಾಪನೆ, ಕನಕ ಭವನಗಳ ನಿರ್ಮಾಣ, ಕನಕದಾಸ ಪ್ರಶಸ್ತಿಯ ಸ್ಥಾಪನೆ ಮೊದಲಾದವೆಲ್ಲ ಕನಕದಾಸರ ಪ್ರಾಮುಖ್ಯತೆಯನ್ನು ಹೇಳುತ್ತದೆ. ಈ ಕಾರಣಕ್ಕಾಗಿಯೇ ಉಳಿದ ದಾಸವರೇಣ್ಯರಿಂದ ಕನಕದಾಸರು ಪ್ರತ್ಯೇಕವಾಗಿ...

ದೇವುಡು ಮಹಾದರ್ಶನ

ಕನ್ನಡ ಸಾಹಿತ್ಯದ ಅಗ್ರಗಣ್ಯ ಲೇಖಕರಲ್ಲಿ ಒಬ್ಬರಾಗಿದ್ದ ದೇವುಡು ನರಸಿಂಹ ಶಾಸ್ತ್ರಿಗಳ ವ್ಯಕ್ತಿತ್ವ ಹಾಗೂ ಕೃತಿಗಳ ದರ್ಶನ ಮಾಡಿಸುವ “ದೇವುಡು ದರ್ಶನ’ ಕೃತಿಯನ್ನು ಹೊ.ರಾ. ಸತ್ಯನಾರಾಯಣ ಮತ್ತು ಗಂಗಾಧರ ದೇವುಡು ಅವರು ಸಂಪಾದಿಸಿದ್ದಾರೆ. ದೇವುಡು ಅವರ ಜೀವನ ಒಂದು ಭಾಗ ಮತ್ತು ಅವರ ಸಾಹಿತ್ಯ ಕೃತಿಗಳ ವಿಮರ್ಶೆ ಎರಡನೇ ಭಾಗದಲ್ಲಿದೆ.ನಿಟ್ಟೂರು ಶ್ರೀನಿವಾಸರಾಯರು, ವಿ. ಸೀತಾರಾಮಯ್ಯ, ಅ.ನ. ಕೃಷ್ಣರಾಯರು, ಬಿ. ಶಿವಮೂರ್ತಿಶಾಸ್ತ್ರಿಗಳು, ಎನ್.ಕೆ. ಕುಲಕರ್ಣಿ ಮೊದಲಾದವರ ಲೇಖನಗಳು ಈ ಭಾಗದಲ್ಲಿವೆ. ದೇವುಡು ಅವರೇ ಬರೆದಿರುವ ಆತ್ಮಕಥನವೂ ಇದರಲ್ಲಿದೆ. ದೇವುಡು ನರಸಿಂಹ ಶಾಸ್ತ್ರಿಗಳ...

ಘಮಘಮಿಸುವ “ಸುರಗಿ’

ಕನ್ನಡ ಭಾಷೆಯಲ್ಲಿ ನಾನು ಆಡಿದ ಮೊದಲನೇ ನುಡಿ ಯಾವುದು ಎನ್ನುವುದನ್ನು ನನ್ನ ಅಮ್ಮ ಮತ್ತು ನನ್ನ ಸಂಬಂಧದವರು ನೆನಪು ಮಾಡುತ್ತಾ ಇದ್ದುದರಿಂದ ನನಗೂ ನೆನಪಿದೆ. ಒಂದು ಸಾರಿ ಅಬ್ಬಕ್ಕ (ಅವರ ಮನೆಯ ಕೆಲಸದ ಹೆಂಗಸು) ನಮ್ಮ ಮನೆಗೆ ಬಂದಾಗ ನಾನು ಅವಳ ಬಗ್ಗೆ ಹೀಗೆ ತಮಾಷೆ ಮಾತನಾಡಿದೆನಂತೆ, “ಅಬ್ಬಕ್ಕನ­ ಗುಬ್ಬಕ್ಕ ಕಚ್ಕೊಂಡೋಯ್ತು’. ಅದೇನು ಬಹಳ ದೊಡ್ಡ ವಾಕ್ಯವಲ್ಲ. ಆದರೆ ನನ್ನ ಅಮ್ಮ “ನೋಡು, ನಮ್ಮ ಅನಂತು “ಅಬ್ಬಕ್ಕನ­ ಗುಬ್ಬಕ್ಕ ಕಚ್ಕೊಂಡೋಯ್ತು’’ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿದ್ದರು. ಇಲ್ಲೊಂದು...

ಸತ್ಯಾನ್ವೇಷಣೆಯ ಕಥನಗಾರಿಕೆಯ ಹೆಗ್ಗುರುತು

ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರಾದ ಕೆ.ಸತ್ಯನಾರಾಯಣ ಅವರ ಹೊಸ ಕಥಾಸಂಕಲನ “ಹೆಗ್ಗುರುತು’ ಹತ್ತು ಕತೆಗಳನ್ನು ಒಳಗೊಂಡಿದೆ. ಈ ಸಂಕಲನದ ಮೂಲಕ ಕನ್ನಡ ಕಥನಕ್ರಿಯೆಯಲ್ಲಿ ಹೊಸ ಹೆಗ್ಗುರುತು ಮೂಡಿಸುವ ಪ್ರಯತ್ನವನ್ನು ಅವರು ಮಾಡಿದ್ದಾರೆ. ಈ ಸಂಕಲನಕ್ಕೆ ಮಲ್ಲಿಕಾರ್ಜುನ ಹಿರೇಮಠ ಅವರು ವಿಸ್ತಾರವಾದ, ಅಧ್ಯಯನಪೂರ್ಣ ವಿಮರ್ಶೆಯನ್ನು ಮುನ್ನುಡಿಯ ರೂಪದಲ್ಲಿ ಬರೆದಿರುವರು. ಹಿರೇಮಠ ಅವರು ಹೇಳದೆ ಬಿಟ್ಟ ಒಳನೋಟಗಳು ಏನಾದರೂ ಇವೆಯೇ ಎಂದು ನೋಡಿ ಹೇಳುವುದಕ್ಕೆ ಮಾಡಿರುವ ಪುಟ್ಟ ಪ್ರಯತ್ನ ಇದು. ಕೆ.ಸತ್ಯನಾರಾಯಣ ಅವರು ಕಥಾರಚನೆಯನ್ನು ಒಂದು ಸವಾಲಿನ, ಸೃಜನಶೀಲ ಮನಸ್ಸಿನ ಪ್ರತಿಷ್ಠೆಯ...

ಸಂಸಾರ ಸಮನ್ವಯ ಸಾರುವ ಶಾಂತ ಕತೆಗಳು

ಶಾಂತಾದೇವಿ ಕಣವಿಯವರು ತಮ್ಮ ಮೊದಲ ಕತೆಯನ್ನು ಬರೆದದ್ದು 1958ರಲ್ಲಿ. ಅಲ್ಲಿಂದ ಇಲ್ಲಿಗೆ ಸರಿಸುಮಾರು ಐವತ್ತೈದು ವರ್ಷಗಳೇ ಕಳೆದುಹೋಗಿವೆ. ಈ ನಡುವೆ ಅವರು ಬರೆದು ಪ್ರಕಟಿಸಿದ ಕಥಾಸಂಕಲನಗಳು ಏಳು. ಕಥಾ ಸಂಕಲನದಲ್ಲಿ ಬಾರದೆ ಇರುವ ಕೆಲವು ಕತೆಗಳನ್ನು ಸೇರಿಸಿದರೆ ನೂರಹತ್ತರಷ್ಟು ಕತೆಗಳನ್ನು ಶಾಂತಾದೇವಿಯವರು ಬರೆದಿರುವರು. ಹೆಚ್ಚೂಕಡಿಮೆ ವರ್ಷಕ್ಕೆ ಎರಡು ಕತೆಗಳಂತೆ ಅನ್ನಿ. ಶಾಂತಾದೇವಿ ಕಣವಿಯವರ ಈ ವರೆಗಿನ ಎಲ್ಲ ಕತೆಗಳನ್ನು ಸೇರಿಸಿ ಸಮಗ್ರ ಸಂಪುಟವನ್ನು ಬೆಂಗಳೂರಿನ ಸಪ್ನ ಬುಕ್ ಹೌಸ್ ಹೊರತಂದಿದೆ. ಅವರಿಗೆ ಸರಿಯಾದ ವಿಮರ್ಶನ ನ್ಯಾಯವನ್ನು ಒದಗಿಸುವ ರೀತಿಯಲ್ಲಿ...