ಮಾಸ್ತಿ ಕಥಾಲೋಕಕ್ಕೆ ಹೊಸ ಬೆಳಕಿಂಡಿ

ಕೆ.ಸತ್ಯನಾರಾಯಣ ಅವರ- ಮಹಾ ಕಥನದ ಮಾಸ್ತಿ ಕನ್ನಡದ ಪ್ರಮುಖ ಗದ್ಯ ಬರೆಹಗಾರರಲ್ಲಿ ಒಬ್ಬರಾಗಿರುವ ಕೆ.ಸತ್ಯನಾರಾಯಣ ಅವರು ಸುಮಾರು ನಾಲ್ಕು ದಶಕಗಳಿಂದ ಕನ್ನಡದ ಆಸ್ತಿ ಎಂದು ಹೆಸರಾಗಿರುವ ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರನ್ನು ಓದುತ್ತ, ಅವರ ಪ್ರಭಾವಕ್ಕೆ ಒಳಗಾಗುತ್ತ, ಆ ಪ್ರಭಾವವನ್ನು ಮೀರಿ ಬೆಳೆಯಲು ಪ್ರಯತ್ನಿಸುತ್ತ, ತಮ್ಮದೇ ಒಂದು ಕಥನ ಶೈಲಿಯನ್ನು ರೂಢಿಸಿಕೊಂಡವರು. ಮಾಸ್ತಿಯವರ ಪ್ರಥಮ ಕಥಾ ಸಂಕಲನ ಪ್ರಕಟವಾಗಿ ನೂರು ವರ್ಷಗಳು ಆಗುತ್ತಿರುವ ಸಂದರ್ಭದಲ್ಲಿ ಮಾಸ್ತಿಯವರ ಕತೆಗಳನ್ನು ಸುದೀರ್ಘವಾಗಿ ಅಧ್ಯಯನ ಮಾಡಿ `ಮಹಾ ಕಥನದ ಮಾಸ್ತಿ’ ಎಂಬ...