ಗುರುತ್ವವನ್ನು ಅಡಗಿಸಿಕೊಂಡಿರುವ ಲಘು ಬರೆಹಗಳು

ಕೆ.ಸತ್ಯನಾರಾಯಣ ಅವರ ಕಪಾಳಮೋಕ್ಷ ಪ್ರವೀಣ ತಮ್ಮ ನಿರಂತರ ಬರೆಹಗಳಿಂದ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಶ್ರೀಮಂತಗೊಳಿಸುತ್ತಿರುವ ಕೆ.ಸತ್ಯನಾರಾಯಣ ಅವರು ಇದೀಗ ಕಪಾಳಮೋಕ್ಷ ಪ್ರವೀಣ' ಎಂಬ ನೂತನ ಕೃತಿಯಲ್ಲಿ ಕೆಲವು ಸ್ವಭಾವ ಚಿತ್ರಗಳನ್ನು ನೀಡಿದ್ದಾರೆ. ತಮ್ಮ ಈ ಬರೆಹಗಳ ಹೊಳಹು ಹೊಳೆದದ್ದು ಡಿವಿಜಿಯವರಜ್ಞಾಪಕ ಚಿತ್ರಶಾಲೆ’ ಎಂಬ ಕೃತಿಯಿಂದ ಎಂದು ಲೇಖಕರು ಹೇಳಿಕೊಂಡಿದ್ದಾರೆ. ಹಾಗೆಯೇ ಜಾರ್ಜ್‌ ಆರ್ವೆಲ್ಲರ ಬರೆಹಗಳೂ ಅವರ ಮೇಲೆ ಪ್ರಭಾವ ಬೀರಿರಬಹುದು. ತುದಿವಾದಿಗಳು' ಬರೆಹದಲ್ಲಿ ಅವರು ಆರ್ವೆಲ್‌ರ,ಒಬ್ಬ ಮನುಷ್ಯ ನಮಗೆ ವೈಯಕ್ತಿಕ ಸ್ತರದಲ್ಲಿ ಪರಿಚಯವಾದಮೇಲೆ, ಆತ್ಮೀಯತೆ ಮೂಡಿದ...