ಆತ್ಮಚರಿತ್ರೆಯ ಮೀಮಾಂಸೆ- ಅವರವರ ಭವಕ್ಕೆ ಓದುಗರ ಭಕುತಿಗೆ

ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಕೆ.ಸತ್ಯನಾರಾಯಯಣ ಅವರು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದವರು. ಸೃಜನ ಶಕ್ತಿಯ ಜೊತೆಯಲ್ಲಿ ವಿಮರ್ಶನ ಶಕ್ತಿಯನ್ನೂ ಮೇಳೈಸಿಕೊಂಡವರು. ಅವರ ಹೊಸ ಕೃತಿ `ಅವರವರ ಭವಕ್ಕೆ ಓದುಗರ ಭಕುತಿಗೆ' ಅವರ ಸೃಷ್ಟಿಕ್ರಿಯೆಯ ಹೊಸ ಸಾಮರ್ಥ್ಯದ ಕಡೆಗೆ ಬೆರಳು ತೋರಿಸುತ್ತದೆ. ಈ ಕೃತಿಯಲ್ಲಿ ಅವರು ಕನ್ನಡದ ಏಳು ಜನ ಹೆಸರಾಂತ ಸಾಹಿತಿಗಳು ರಚಿಸಿರುವ ಆತ್ಮಚರಿತ್ರೆಗಳನ್ನು ಪರಿಶೀಲನೆಗೆ ಎತ್ತಿಕೊಂಡಿದ್ದಾರೆ. ಅದರ ಮೂಲಕ ಅವರು ಆತ್ಮಚರಿತ್ರೆ ಪ್ರಕಾರಕ್ಕೆ ಒಂದು ವ್ಯಾಖ್ಯೆಯನ್ನು ನೀಡುವ ಪ್ರಯತ್ನ ಮಾಡಿರುವುದನ್ನು ಗಮನಿಸಬಹುದು. ಈ...