ಮರುಳ ಮುನಿಯನ ಕಗ್ಗ ಒಂದು ದರ್ಶನ ಕಾವ್ಯ

ಮಂಕು ತಿಮ್ಮನ ಕಗ್ಗಕ್ಕಿಂತ ಒಂದು ಮೆಟ್ಟಿಲು ಮೇಲಿನ ವೈಚಾರಿಕತೆ ಇದರಲ್ಲಿದೆ (ನಾನು ಮರುಳ ಮುನಿಯನ ಕಗ್ಗವನ್ನು ಓದಿದ್ದು ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ 1984ರಲ್ಲಿ. ಪಠ್ಯಕ್ರಮದ ಭಾಗವಾಗಿ ಬರೆದ ವಿಮರ್ಶೆ ಇದು. ಸುಮಾರು 38 ವರ್ಷಗಳ ಹಿಂದೆ.) ಅಕಸ್ಮಾತ್ತಾಗಿ ಡಿವಿಜಿ ಕನ್ನಡಿಗರ ನೆನಪಿನಿಂದ ಮರೆಯಾದರೂ ಅವರ ಮಂಕುತಿಮ್ಮ ಮಾತ್ರ ಮರೆಯಾಗಲಾರ. ಡಿವಿಜಿ ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಅವರು ಟ್ಟುಹೋದ ಸಾಹಿತ್ಯ ರಾಶಿ ಮಾತ್ರ ಇದೆ. ಅವರು ನಿಧನರಾಗಿ ಒಂಬತ್ತು ವರ್ಷಗಳ ನಂತರ (1984) ಅವರದೇ ಆದ ಕೃತಿಯೊಂದು...

ಜೀವನ ಪ್ರೀತಿಯನ್ನು ತುಂಬುವ ಕೃತಿ

ಶ್ರೀಯುತ ಎಲ್‌.ಎಸ್‌.ಶಾಸ್ತ್ರಿಯವರು ಅವಿಶ್ರಾಂತ ಬರೆಹಗಾರರು. ಅವರ ಬರೆವಣಿಗೆಯನ್ನು ನಾನು ಮೂರು ದಶಕಗಳಿಗೂ ಅಧಿಕ ಕಾಲದಿಂದ ಓದುತ್ತ ಬಂದವನು. ನಾನು ಬೆಳಗಾವಿಯಲ್ಲಿ ನಾಡೋಜ ಪತ್ರಿಕೆಯಲ್ಲಿ ನನ್ನ ಪತ್ರಿಕೋದ್ಯೋಗವನ್ನು ಆರಂಭಿಸಿದಾಗ ನನ್ನ ಮತ್ತು ಅವರ ಮೊದಲ ಭೇಟಿ. ಅವರ ತಾಲೂಕಿನವನೇ ನಾನು ಆಗಿದ್ದರಿಂದ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ. ನಾಡೋಜದ ಸಾಪ್ತಾಹಿಕ ಪುರವಣಿಯನ್ನು ಅವರೇ ಆಗ ನೋಡಿಕೊಳ್ಳುತ್ತಿದ್ದರು. ಶಾಸ್ತ್ರಿಯವರು ಹಲವು ಪ್ರಕಾರದ ಬರೆವಣಿಗೆಯನ್ನು ಮಾಡಿದ್ದರೂ ಕಾದಂಬರಿಯೊಂದನ್ನು ಬರೆದಿರುವುದು ಇದೇ ಮೊದಲು. ಅವರಿಗೆ ಈಗ ಹತ್ತಿರ ಹತ್ತಿರ 80 ವರ್ಷ....