ಲೇಖನ

ಹೇರಾಮ್‌! ಏಯ್‌ ನಥೂರಾಮ್‌!!

(ಈ ಲೇಖನ ಕನ್ನಡಪ್ರಭ ಪತ್ರಿಕೆಯ ಸಾಪ್ತಾಹಿಕ ಪ್ರಭದಲ್ಲಿ 26-1-2003ರಂದು ಪ್ರಕಟವಾದದ್ದು)ಮೋಹನದಾಸ ಕರಮಚಂದ ಗಾಂಧಿ ಉರ್ಫ್‌ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು 1948ರ ಜನವರಿ 30ರಂದು ನಥೂರಾಮ ಗೋಡಸೆ ದಿಲ್ಲಿಯ ಬಿರ್ಲಾ ಭವನದಲ್ಲಿ ಗುಂಡಿಕ್ಕಿ ಕೊಂದು ಹಾಕಿದ. ಈ ಹತ್ಯೆಗಾಗಿ ಅವನನ್ನು ಗಲ್ಲಿಗೇರಿಸಲಾಯತು.ಈ ಎರಡು ವಾಕ್ಯಗಳಲ್ಲಿ ಸ್ವತಂತ್ರ ಭಾರತದ ಅತ್ಯಂತ ದುರಂತವಾದ ಘಟನೆಯೊಂದನ್ನು ಪೊಲೀಸ್‌‌ ಶೈಲಿಯಲ್ಲಿ ಹೇಳಿ ಮುಗಿಸಬಹುದು. ಗಾಂಧೀಜಿಯವರ ಹತ್ಯೆ ನಡೆದು 55 ವರ್ಷಗಳಾದವು. ಗಾಂಧೀಜಿ ಹತ್ಯೆ ನಂತರದ ಎರಡನೆ ತಲೆಮಾರು ಗಾಂಧೀಜಿ ಹತ್ಯೆಯ ವಿವರಗಳ ಬಗೆಗೆ ಕತ್ತಲೆಯಲ್ಲಿದೆ....

ಎಲ್ಲ ನೇಮದೆಲ್ಲೆ ಮೀರಿ ಅನಂತ ಸುಖದೆಡೆ ಮುಖವ ಮಾಡಿ- ಹಾದರವಲ್ಲ, ಆದರದ ಸಂಬಂಧ, ಇದು ಪೊಲಿಯೋಮರಿ

ಒಬ್ಬರಿಗಿಂತ ಹೆಚ್ಚು ಜನರೊಂದಿಗೆ ಪ್ರೇಮ ಸಂಬಂಧವನ್ನು ಹೊಂದುವುದನ್ನು ಭಾರತೀಯ ಸಂಸ್ಕೃತಿಯಲ್ಲಿ ಹಾದರ ಎಂದು ಕರೆಯುತ್ತಾರೆ. ಆದರೆ ಕೆಲವು ಪಾಶ್ಚಾತ್ಯ ದೇಶಗಳಲ್ಲಿ ಪರಸ್ಪರ ಒಪ್ಪಿಗೆಯ ಮೇಲೆ ಒಬ್ಬರಿಗಿಂತ ಹೆಚ್ಚು ಜನರೊಂದಿಗೆ ಸಂಬಂಧ ಇಟ್ಟುಕೊಳ್ಳುವ ಪರಿಪಾಠವೊಂದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಹಾದರದ ಸಂಬಂಧ ಅಲ್ಲಿ ಆದರದ ಸಂಬಂಧವಾಗುತ್ತಿದೆ. ಈ ಸಂಬಂಧ ಪರಸ್ಪರ ಒಪ್ಪಿಗೆಯದು, ನೈತಿಕವಾದದ್ದು ಮತ್ತು ಜವಾಬ್ದಾರಿಯುತವಾದದ್ದು. ಒಬ್ಬರಿಗೊಬ್ಬರು ಇಲ್ಲಿ ಮೋಸ ಮಾಡುವ ಪ್ರಶ್ನೆಯೇ ಇಲ್ಲ. ಈ ಬಹುಮುಖಿ ಪ್ರೇಮಸಂಬಂಧದಲ್ಲಿ ಒಳಗೊಳ್ಳುವವರಿಗೆ ಪರಸ್ಪರರ ಅನ್ಯ ಸಂಬಂಧಗಳ ಕುರಿತು ಗೊತ್ತಿರುತ್ತದೆ. ಅಲ್ಲಿ...

ಹಿಂಗೋನಿಯಾ ಗೋಶಾಲೆ ನರಕದಿಂದ ನಂದಗೋಕುಲವಾದ ಕತೆ

ಗೋವು ಇಲ್ಲದೆ ಶ್ರೀಕೃಷ್ಣನನ್ನು ಕಲ್ಪಿಸಿಕೊಳ್ಳುವುದೂ ಕಷ್ಟ. ಅದಕ್ಕೇ ಕೃಷ್ಣನನ್ನು ಗೋಪಾಲಕೃಷ್ಣ ಎಂದೂ ಕರೆಯುವುದು. ಬೃಂದಾವನದಲ್ಲಿ ಗೋವುಗಳನ್ನು ಕಾಯುತ್ತಲೇ ಬೆಳೆದವನು ಕೃಷ್ಣ. ಬೆಣ್ಣೆಕಳ್ಳನೆಂದು ಭಕ್ತರು ಪ್ರೀತಿಯಿಂದ ಆತನಿಗೆ ಬಿರುದನ್ನೂ ನೀಡಿದ್ದಾರೆ. ಆತನ ಬಾಲಲೀಲೆಗಳಲ್ಲಿ ಬೆಣ್ಣೆಯ ಕಳ್ಳತನ, ಮೊಸರು ಗಡಿಗೆಗಳನ್ನು ಒಡೆದು ಮೊಸರು ಕುಡಿಯುವುದು ಎಲ್ಲವೂ ಸೇರಿದೆ. ಕೃಷ್ಣ ಭಕ್ತಿಯ ಪ್ರಸಾರ ಮಾಡುವ ಇಸ್ಕಾನ್ ಸಂಸ್ಥೆಗೆ ಕೃಷ್ಣ ಬೇರೆಯಲ್ಲ ಗೋವು ಬೇರೆಯಲ್ಲ. ಗೋ ಸೇವೆಯಲ್ಲಿಯೇ ಕೃಷ್ಣನನ್ನು ಕಾಣಬಹುದು ಎಂದು ಅವರು ನಂಬಿದ್ದಾರೆ. ಇದಕ್ಕೆ ಉದಾಹರಣೆ ರಾಜಸ್ಥಾನದ ಹಿಂಗೋನಿಯಾದ ಗೋಶಾಲೆಯ ಉಸ್ತುವಾರಿಯನ್ನು...

ರಾಧೆಯ ನೆಲದಲ್ಲಿ ಕೃಷ್ಣನ ಹುಡುಕಾಟ

ಶ್ರೀಕೃಷ್ಣನ ಜನ್ಮಸ್ಥಾನ ಮಥುರಾ ಮತ್ತು ಆತನು ಆಡಿ ಬೆಳೆದ ಬೃಂದಾವನಕ್ಕೆ ನೀವು ಕಾಲಿಡುತ್ತಿದ್ದಂತೆ ಕೇಳುವುದು ಒಂದೇ ನಾಮ, ಅದು ರಾಧೆ! ಜೊತೆಯಲ್ಲಿ ಹರೇರಾಮ ಹರೇಕೃಷ್ಣ, ಕೃಷ್ಣಕೃಷ್ಣ ಹರೇಹರೇ ಎಂಬ ನಾಮ ಸಂಕೀರ್ತನ. ನಿಜ ಭಕ್ತರಿಗೆ ಮಾತ್ರ ಬೃಂದಾವನ. ಕೃಷ್ಣ-ರಾಧೆಯರ ನಾಮಸ್ಮರಣೆ ಮಾಡದ ವ್ಯಕ್ತಿ ಅಲ್ಲಿ ಇಲ್ಲವೇ ಇಲ್ಲ. ದಿನ ನಿತ್ಯವೂ ಜಾತ್ರೆ. ದೇವಾಲಯಗಳಲ್ಲಿ ನೂಕುನುಗ್ಗಲು. ಹಲವು ರೀತಿಯ ಪರಿಕ್ರಮಗಳು. ಉದ್ದಂಡ ನಮಸ್ಕಾರ ಹಾಕುತ್ತಲೇ ಪರಿಕ್ರಮ ನಡೆಸುವ ಭಕ್ತಿಯ ಪರಾಕಾಷ್ಠೆ. ವಿದೇಶಗಳಿಂದಲೂ ಭಕ್ತರ ದಂಡು. ಅವರೂ ಹರಿನಾಮ ಧರಿಸಿ,...

ಕೂಡಂಕುಲಂ ೮ ಸಾವಿರ ಜನರ ಮೇಲೆ ದೇಶದ್ರೋಹದ ಪ್ರಕರಣ

ದೇಶದ್ರೋಹದ ಆಪಾದನೆಯ ಮೇಲೆ ಬಂಧಿತನಾಗಿ ನಂತರ ದೆಹಲಿ ಹೈ ಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿರುವ ದೆಹಲಿಯ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕ ಕನ್ಹಯ್ಯಕುಮಾರ್ ಮಾಡಿದ ಭಾಷಣವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಳಿಸಿಕೊಂಡಿದ್ದಾರೆ ಎಂದೇ ಭಾವಿಸೋಣ. ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣವನ್ನೂ ಮೀರಿಸುವ ಶೈಲಿಯಲ್ಲಿ ಅಂದು ಆತ ಆಡಿದ ಮಾತು ಈ ದೇಶವನ್ನು ಆಳಿದವರನ್ನು ಆಳುವವರನ್ನು ಚಿಂತನೆಗೆ ಹಚ್ಚುವಂತಿತ್ತು. ಅದ್ಯಾವ ರಾಜಕೀಯ ಸಿದ್ಧಾಂತದ ಹಿನ್ನೆಲೆಯಿಂದ ಬಂದವನಾದರೂ ಆತ ಮುಂದಿಟ್ಟ ಕಟು ವಾಸ್ತವ ಪಕ್ಷಗಳ ಎಲ್ಲೆಯನ್ನು...

ಹೆಗಲ ಮೇಲಿನ ಅವರ ಕೈ ಭಾರದ ಬಿಸಿ

ಇದು ಎಂದಿನ ಭಾನುವಾರವಲ್ಲ. ಕಲಬುರ್ಗಿಯವರ ಹತ್ಯೆಯ ಸುದ್ದಿಯನ್ನು ಸಿದ್ದಣ್ಣನವರ ಹೇಳುತ್ತಿದ್ದಂತೆಯೇ ಒಂದು ಕ್ಷಣ ಕಂಪಿಸಿದೆ. ಬಹುಶಃ ಕಲಬುರ್ಗಿಯವರ ಎಲ್ಲ ಶಿಷ್ಯಕೋಟಿಯ ಸ್ಥಿತಿಯೂ ಅದೇ ಆಗಿರಬಹುದು. ನೆನಪುಗಳು ಕಳೆದ ಶತಮಾನದ ೮೦ರ ದಶಕಕ್ಕೆ ಜಾರಿತು. ೮೩-೮೫ರ ಅವಧಿಯಲ್ಲಿ ಅವರು ಕವಿವಿಯ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿದ್ದರು. ಅದೇ ಅವಧಿಯಲ್ಲಿ ನಾನು ಕೂಡ ಅಲ್ಲಿ ಎಂ.ಎ.ವಿದ್ಯಾರ್ಥಿಯಾಗಿದ್ದೆ. ಅದೇ ವರ್ಷದಿಂದ ವಿವಿಧ ಡೀನ್‌ಗಳಿಗೆ ಎರಡು ವರ್ಷಗಳ ರೊಟೇಶನ್ ಪದ್ಧತಿ ಆರಂಭವಾಗಿತ್ತು. ಇವರಿಗಿಂತ ಮೊದಲು ಎಸ್.ಎಂ.ವೃಷಭೇಂದ್ರಸ್ವಾಮಿಯವರು ವಿಭಾಗದ ಮುಖ್ಯಸ್ಥರಾಗಿದ್ದರು. ಹೊಸ ಪದ್ಧತಿಯಿಂದಾಗಿ ವೃಷಭೇಂದ್ರ...

ಗಾಂಧೀಜಿಯ ಆ ಯಾತನಾಮಯ ಕೊನೆಯ ದಿನಗಳು

ನಾನೇನೋ ಹೇಳ್ತಾಹೇಳ್ತಾ ಹೋಗ್ಬಿಡ್ತೇನೆ, ಆದರೆ ಯಾವುದಾದರೊಂದುದಿನ ನಾನು ನೆನಪಿಗೆ ಬರ್ತೇನೆ, ಒಬ್ಬ ದೀನ ಮನುಷ್ಯ ಹೇಳ್ತಾ ಇದ್ನಲ್ಲ, ಅದು ಸರಿನೇ ಇತ್ತು ಅಂತ. (ಗಾಂಧಿ, ೧೬ ಅಕ್ಟೋಬರ್ ೧೯೪೭) ದೇಶ ಸ್ವಾತಂತ್ರ್ಯವನ್ನು ಪಡೆದ ಎರಡೇ ತಿಂಗಳಲ್ಲಿ ರಾಷ್ಟ್ರಪಿತನು ಆಡಿದ ಮಾತುಗಳು ಇವು. ದೇಶಕ್ಕೆ ಸ್ವಾತಂತ್ರ್ಯ ಸಿಗುವುದು ಖಚಿತವಾಗುತ್ತಿದ್ದಂತೆಯೇ ಅವರ ನೆಚ್ಚಿನ ಭಂಟರೇ ಗಾಂಧಿ ಇನ್ನು ಅಪ್ರಸ್ತುತ, ಗಾಂಧಿಯ ಸಿದ್ಧಾಂತಗಳು ಸ್ವತಂತ್ರ ಭಾರತಕ್ಕೆ ಅಗತ್ಯವಿಲ್ಲ, ಹಿಂದ್ ಸ್ವರಾಜ್ ಎಂಬುದು ಬಹಳ ಹಳೆಯ ಕಲ್ಪನೆ, ಈಗ ಜಾಗತಿಕವಾಗಿ ಅದೆಷ್ಟೋ ಬದಲಾವಣೆಗಲಾಗಿವೆ,...

ಪತ್ರಿಕೋದ್ಯಮ ಮತ್ತು ಭಾವೈಕ್ಯತೆ

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಜವಾಬ್ದಾರಿಯದು. ಪ್ರಭುತ್ವ ಮತ್ತು ಪ್ರಜೆಯ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಪತ್ರಿಕೆಗಳು ಪ್ರಜೆಗಳ ನಡುವೆ ಸೌಹಾರ್ದ ಬದುಕನ್ನು ಉಂಟುಮಾಡುವ ಕೆಲಸವನ್ನೂ ಮಾಡುತ್ತವೆ. ವಿವಿಧತೆ ಇರುವಲ್ಲಿ ಏಕತೆ. ಇದೊಂದು ಆದರ್ಶ. ಇದನ್ನು ನಮ್ಮ ರಾಷ್ಟ್ರದ ಅಗ್ಗಳಿಕೆ ಎನ್ನುವಂತೆ ಹೇಳಲಾಗುತ್ತಿದೆ. ಸಮಾಜದ ವಿವಿಧ ವರ್ಗಗಳೊಂದಿಗೆ ಸುಮಧುರ ಬಾಂಧವ್ಯವನ್ನು ಬೆಸೆಯುವ ಜವಾಬ್ದಾರಿ ತಾನೇತಾನಾಗಿ ಪತ್ರಿಕೆಯ ಹೆಗಲೇರಿರುತ್ತದೆ. ಒಂದೇ ಜನಾಂಗದ ಪ್ರಜೆಗಳಿರುವ ದೇಶದಲ್ಲಿ ಸೌಹಾರ್ದದ ಸಮಸ್ಯೆ ಇರುವುದಿಲ್ಲ. ಆದರೆ ಭಾರತದಂಥ ಹಲವು ಜನಾಂಗಗಳ, ಹಲವು ಭಾಷೆಗಳ, ಹಲವು...

ಗಾಂಧಿ- ನಾಯಕರಿವರು

ಗಾಂಧಿ Ways ನಾಯಕರಿವರು ಗಾಂಧಿ ಬದುಕಿದ ರೀತಿ ಇಂದು ಲೋಕದೆಲ್ಲೆಡೆ ಆದರ್ಶವೆನಿಸಿದ್ದರೆ, ಅದಕ್ಕೆ ಅವರನ್ನು ಪ್ರಭಾವಿಸಿದ ಅಸಂಖ್ಯ ಇತರ ಮಾದರಿಗಳೂ ಕಾರಣ. ಗಾಂಧಿಜಯಂತಿ ಸಂದರ್ಭದಲ್ಲಿ ಅಂಥದೊಂದು ನೆನಪು. ಆಧುನಿಕ ಜಗತ್ತಿಗೆ ಭಾರತದ ಅತಿ ದೊಡ್ಡ ಕೊಡುಗೆ ಯಾವುದೆಂದು ಯಾರಾದರೂ ಕೇಳಿದರೆ ‘ಮಹಾತ್ಮ ಗಾಂಧಿ’ ಎಂದು ಸ್ವಲ್ಪವೂ ಅನುಮಾನಿಸದೆ ಹೇಳಿಬಿಡಬಹುದು. ಗಾಂಧೀಜಿಯವರಿಗೆ ಸತ್ಯ ದೇವರಷ್ಟೇ ವಾಸ್ತವ. ದೇವರಷ್ಟೇ ಸರ್ವಶಕ್ತ. ವಾಸ್ತವವಾಗಿ ಸತ್ಯವೇ ದೇವರು. ಏಕೆಂದರೆ ಜಗತ್ತು ನಿಂತಿರುವುದೇ ಸತ್ಯದ ಅಡಿಗಲ್ಲಿನ ಮೇಲೆ. ಅದು ಎಂದಿಗೂ ನಾಶವಾಗುವಂಥದ್ದಲ್ಲ. ಗಾಂಧೀಜಿಗೆ ಅತ್ಯಂತ...

ಡಬಲ್ ಕ್ರಾಸರ್ ಸೀಕ್ರೆಟ್ ಏಜೆಂಟ್‌ನ ಸೂಪರ್ ಸ್ಟೋರಿ

ಶೀತಲ ಯುದ್ಧದ ಸಮಯದಲ್ಲಿ ಬ್ರಿಟನ್ನಿನ ಬೇಹುಗಾರನಾಗಿ ನಿಯುಕ್ತನಾಗಿದ್ದ ವ್ಯಕ್ತಿಯೊಬ್ಬ ರಶಿಯಾದ ಕೆಜಿಬಿಗೆ ಕೆಲಸ ಮಾಡಿ ಯುರೋಪಿನ ನೂರಾರು ಬೇಹುಗಾರರ ಪ್ರಚ್ಛನ್ನ ಬದುಕಿನ ಬಗ್ಗೆ ಮಾಹಿತಿ ನೀಡಿ ಹಲವರ ಹತ್ಯೆಗೆ ಕಾರಣನಾದ ರೋಚಕ ಕಥೆ ಇದು. ಆತ ಡಬ್ಬಲ್ ಏಜೆಂಟ್ ಜಾರ್ಜ್ ಬ್ಲೇಕ್. ಇದೀಗ ರಶಿಯಾದಲ್ಲಿ ನೆಮ್ಮದಿಯ ಬದುಕನ್ನು ಕಳೆಯುತ್ತಿರುವ ಬ್ಲೇಕ್ ಇತ್ತೀಚೆ ತಮ್ಮ 90ನೆ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇವರ ವಿದ್ರೋಹದಿಂದ ಯುರೋಪಿನ ನೂರಾರು ಗುಪ್ತ ಏಜೆಂಟರ ಹತ್ಯೆ ನಡೆದುಹೋಯಿತು.– ಜೈಲು ಸಿಬ್ಬಂದಿಯೊಬ್ಬರು ನನ್ನನ್ನು ಸಂದರ್ಶಕರ ಕೊಠಡಿಗೆ ಕರೆದುಕೊಂಡು...