ವಿಮರ್ಶೆ

ಕವನದ ಹೊಸ್ತಿಲಲ್ಲಿ

ಇದೀಗ ತಾನೆ ತಿಳಿಯಿತು;ನಾನು ಬಂದ ಈ ದಾರಿನಾನು ಬರಬೇಕೆಂದುಕೊಂಡುದಲ್ಲ!ತಲುಪಿದ ಈ ತಾಣನಾನು ಬರಬೇಕೆಂದುಕೊಂಡುದಲ್ಲ!…. ಇದರಿಂದಾಗುವುದು ಬೇಜಾರು, ಸಿಟ್ಟು. ಯಾರ ಮೇಲೆ, ತನ್ನ ಮೇಲೆ. ಇದೊಂದು ಅಸಹಾಯಕ ಸ್ಥಿತಿ. ಈ ಸಂದರ್ಭದಲ್ಲಿ ನನಗೆ ಮಹಾಕವಿ ಕುವೆಂಪುರವರ ಒಂದು ಮಾತು ನೆನಪಾಗುತ್ತಿದೆ….ಬಂದವರು ಬಂದಂತೆಹೋದವರು ಹೋದಂತೆಬಿಡು ನೀ ಅವರಿವರ ಚಿಂತೆಬದುಕು ನೀ ನಿನ್ನಂತೆ!ಅವರಿವರ ಚಿಂತೆ ಮಾಡದೆ ತಾನು ಹೇಗೆ ಬದುಕಿದೆ ಎಂಬ ಪರೀಕ್ಷಣೆ ಇಲ್ಲಿಯ ಬರೆಹಗಳಲ್ಲಿ ಇದೆ. ಹುತ್ತದ ಕತೆ ಹೇಳುವ ಶಿವಾನಂದರು,ಅಲ್ಲಿಲ್ಲ ಮನುಷ್ಯ ಲೋಕದಶ್ರೇಷ್ಠ-ಕನಿಷ್ಠದ ಅನಿಷ್ಟಗಳು;ಸಮಾನತೆಯ ಹುಚ್ಚೂ ಅಲ್ಲಿಲ್ಲ!….. …...

ನೆದರ್‌ಲ್ಯಾಂಡ್ಸ್‌ ಬದುಕಿನ ಒಳನೋಟಗಳು- ಹುಡುಗುಗಣ್ಣಿನ ಮೂಲಕ

ಬಹುವಿಧ ಜೀವನಾನುಭವವನ್ನು ಹೊಂದಿರುವ ಕೆ.ಸತ್ಯನಾರಾಯಣ ಅವರು ``ನೆದರ್‌ಲ್ಯಾಂಡ್ಸ್‌ ಬಾಣಂತನ'' ಎನ್ನುವ ಪ್ರವಾಸ ಪ್ರಬಂಧ ಪುಸ್ತಕವನ್ನು ಇತ್ತೀಚೆ ಬರೆದಿರುವರು. ಪ್ರವಾಸ ಕಥನ ಎನ್ನದೆ ಪ್ರವಾಸ ಪ್ರಬಂಧ ಎಂದು ಅವರು ಇದನ್ನು ಕರೆದಿರುವುದು ವಿಶೇಷ. ಈ ಹಿಂದೆಯೂ ಅವರು ಪ್ರವಾಸಕ್ಕೆ ಸಂಬಂಧಿಸಿದ ಕೆಲವು ಪುಸ್ತಕಗಳನ್ನು ಬರೆದಿರುವರು. ಈ ಕೃತಿಯ ಮೊದಲ ಅಧ್ಯಾಯವೇ `ವಿದೇಶಿ ಪ್ರವಾಸಾನುಭವ ಅಂದರೇನು?' ಎಂಬ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನವಾಗಿದೆ. ಪರದೇಶಗಳಿಗೆ ಹೋಗುವುದು, ಪ್ರವಾಸ ಸಮಯದಲ್ಲಿ ಪಡೆದ ಅನುಭವಗಳನ್ನು ಕುರಿತು ಬರೆಯುವುದು, ಮಾತನಾಡುವುದು ಎಂದುಕೊಂಡಿದ್ದ ಅವರು `ಅದೊಂದು...

ಸ್ತ್ರೀ ಚೈತನ್ಯದ ವಿವಿಧ ಮಜಲುಗಳ ಅನಾವರಣ `ಚಿಕ್ಕಪುಟ್ಟಮ್ಮನವರ ಗೃಹನ್ಯಾಯ’

ಕೆ.ಸತ್ಯನಾರಾಯಣ ಅವರ ಹೊಸ ಪುಸ್ತಕ `ಚಿಕ್ಕಪುಟ್ಟಮ್ಮನವರ ಗೃಹನ್ಯಾಯ’. ಇದಕ್ಕೆ ಅವರು ಟೆಕ್ಸ್ಟ್‌ ಬುಕ್ ಸ್ತ್ರೀವಾದ ಮತ್ತು ಹವ್ಯಾಸಿ ಸ್ತ್ರೀವಾದಿಗಳ ಬರವಣಿಗೆಯ ಆಚೆಗೂ ಇರುವ ಹೆಣ್ಣು ಕಥೆಗಳು ಎಂದು ಉಪಶೀರ್ಷಿಕೆ ನೀಡಿದ್ದಾರೆ. ಇಲ್ಲಿಯ ಕಥಾ ಜಗತ್ತಿನ ಹಿಂದೆ ಇರುವ ಇನ್ನೊಂದು ಜಗತ್ತು ನನಗೆ ಸಿಕ್ಕಿದೆಯೆನಿಸಿದಾಗ ಬರವಣಿಗೆ ತಾನೇತಾನಾಗಿ ರೂಪುಗೊಂಡಿದೆ ಎಂದು ಲೇಖಕರು ಆರಂಭದಲ್ಲಿ ಹೇಳಿಕೊಂಡಿದ್ದಾರೆ. ಆ ಇನ್ನೊಂದು ಜಗತ್ತುಎಂದರೆ ಸೃಷ್ಟಿಕ್ರಿಯೆಯ ಶರೀರದ ಒಳಗಿರುವ ಆತ್ಮ. ಅದೇ ಧ್ವನಿ. ಪ್ರತಿಯೊಂದು ಕೃತಿಯೂ ಸಾರ್ಥಕವೋ ವಿಫಲವೋ ಎನ್ನುವುದು ಅದು ಹೊರಡಿಸುವ ಧ್ವನಿ...

ಗುಂಡೂಮನೆಯ ಮೂರು ಮುತ್ತು

ಜಿ.ಎಸ್‌.ಸದಾಶಿವ ಅವರು ಮೂರು ಕೃತಿಗಳು ಕನ್ನಡ ಕಾವ್ಯಲೋಕಕ್ಕೆ ಒಬ್ಬರು ಜಿಎಸ್‌ಎಸ್‌ ಇದ್ದಾರೆ. ಅದೇ ರೀತಿ ಕನ್ನಡ ಪತ್ರಿಕಾ ಲೋಕಕ್ಕೂ ಒಬ್ಬರು ಜಿಎಸ್‌ಎಸ್‌ ಇದ್ದರು. ಅವರೇ ಡೂಮನೆ ಶ್ರೀಪಾದರಾವ್‌ ಸದಾಶಿವ. ಕಾಲೇಜಿನಲ್ಲಿ ಪ್ರೊಫೆಸರ್‌ ಆಗಬೇಕು ಎಂದುಕೊಂಡಿದ್ದ ಸದಾಶಿವ ಪತ್ರಿಕಾರಂಗಕ್ಕೆ ಬಂದದ್ದು ತೀರ ಆಕಸ್ಮಿಕ. `ಸಂಯುಕ್ತ ಕರ್ನಾಟಕ'ದಲ್ಲಿ ವೃತ್ತಿ ಆರಂಭಿಸಿದ ಅವರು `ಪ್ರಜಾವಾಣಿ', `ಸುಧಾ' ಬಳಿಕ `ಕನ್ನಡಪ್ರಭ'ಕ್ಕೂ ಕಾಲಿಟ್ಟರು. ಮಹಾಮೌನಿಯಾಗಿದ್ದ ಸದಾಶಿವ ಅವರೊಳಗೊಬ್ಬ ನಗೆಗಾರ ಇದ್ದ ಎಂದರೆ ನಂಬುವುದಕ್ಕೇ ಆಗುವುದಿಲ್ಲ. ಸದಾಶಿವ ಕಥೆಗಾರರೆಂದು ಪ್ರಸಿದ್ಧರಾದವರು. ಹಾಗೆಯೇ ಮಕ್ಕಳ ಸಾಹಿತ್ಯವನ್ನೂ ಅವರು...

ಇರುವುದೆಲ್ಲವ ಬಿಟ್ಟು ಇರದುದರತ್ತ…..

ಡಾ.ನಾ. ಮೊಗಸಾಲೆಯವರ ಇದ್ದೂ ಇಲ್ಲದ್ದು ಕಾದಂಬರಿಯ ಕುರಿತು ಸಮಕಾಲೀನ ಕನ್ನಡ ಸಾಹಿತ್ಯದಲ್ಲಿ ಸಮೃದ್ಧವಾಗಿ ಕೃತಿ ರಚನೆಯಲ್ಲಿ ತೊಡಗಿರುವವರಲ್ಲಿ ಡಾ.ನಾ ಮೊಗಸಾಲೆಯವರು ಮೊದಲ ಶ್ರೇಣಿಯಲ್ಲಿ ನಿಲ್ಲುತ್ತಾರೆ. ನಾನು ಕಳೆದ ಒಂದೂವರೆ ದಶಕದಿಂದ ಡಾ.ನಾ.ಮೊಗಸಾಲೆಯವರು ರಚಿಸಿದ ಎಲ್ಲ ಕೃತಿಗಳನ್ನೂ ಬಹುತೇಕ ಓದಿದ್ದೇನೆ. ಕಾಂತಾವರದಲ್ಲಿ ಕುಳಿತು ಕನ್ನಡ ಕಟ್ಟುವ ಕೆಲಸವನ್ನು ಅವರು ಬಹಳ ಶ್ರದ್ಧೆಯಿಂದ ಮಾಡುತ್ತ ಬಂದಿದ್ದಾರೆ. ಈ ಅವಧಿಯಲ್ಲಿ ಅವರ ಪರಿಸರದಲ್ಲಿ ಬಹಳಷ್ಟು ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ, ಆರ್ಥಿಕ ಸ್ಥಿತ್ಯಂತರಗಳು ನಡೆದಿವೆ. ಇವುಗಳಲ್ಲಿ ಮೊಗಸಾಲೆಯವರು ಬಹಿರಂಗದಲ್ಲಿ ಯಾವುದೇ ಚಳವಳಿಯಲ್ಲಿ ಕಾಣಿಸಿಕೊಂಡು...

ಮನುಷ್ಯ ಬದಲಾಗಲೇಬೇಕು…

ಕತೆಯೇನೋ ಯಾವಾಗಲೂ ತನ್ನ ಪಾಡಿಗೆ ತಾನು ತನ್ನದೇ ಜಗತ್ತಿನಲ್ಲಿ ಇರುತ್ತದೆ. ಅದನ್ನು ನೋಡುವುದರಿಂದ, ಹೇಳುವವರಿಂದ, ಬರೆಯುವವರಿಂದ ಕತೆಯ ಒಂದಷ್ಟು ಭಾಗ ಮಾತ್ರ ಈ ಜಗತ್ತಿಗೆ ಬರುತ್ತದಷ್ಟೆ.. (ಒಂದು ಭೋಜನ ಮೀಮಾಂಸೆ) ಎಂಬ ನಂಬಿಕೆಯಿಂದ ಬರೆಯುತ್ತಿರುವ ಕತೆಗಾರ ಕೆ. ಸತ್ಯನಾರಾಯಣ ಅವರ `ಮನುಷ್ಯರು ಬದಲಾಗುವರೆ?’ ಕಥಾಸಂಕಲನ ಮನುಷ್ಯ ಜಗತ್ತಿನ ಹಲವು ಸೂಕ್ಷ್ಮ ಸುಳಿಹುಗಳನ್ನು ಅರ್ಥಮಾಡಿಕೊಳ್ಳುವುದಕ್ಕೆ ನೆರವಾಗುತ್ತದೆ. ಕತೆಗಾರನ ಮುಂದೆ ವಿಶಾಲವಾದ, ವಿಚಿತ್ರವಾದ ಜಗತ್ತಿದೆ. ಅವರವರ ನೋಟಕ್ಕೆ ತಕ್ಕಂತೆ ಅದು ಅವರಿಗೆ ದಕ್ಕುತ್ತದೆ. ಹಾಗೆ ದಕ್ಕಿಸಿಕೊಳ್ಳುವಾಗ ಅವರಿಗೆ ಜವಾಬ್ದಾರಿಯೂ ಇರುತ್ತದೆ....

ಮರುಳ ಮುನಿಯನ ಕಗ್ಗ ಒಂದು ದರ್ಶನ ಕಾವ್ಯ

ಮಂಕು ತಿಮ್ಮನ ಕಗ್ಗಕ್ಕಿಂತ ಒಂದು ಮೆಟ್ಟಿಲು ಮೇಲಿನ ವೈಚಾರಿಕತೆ ಇದರಲ್ಲಿದೆ (ನಾನು ಮರುಳ ಮುನಿಯನ ಕಗ್ಗವನ್ನು ಓದಿದ್ದು ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ 1984ರಲ್ಲಿ. ಪಠ್ಯಕ್ರಮದ ಭಾಗವಾಗಿ ಬರೆದ ವಿಮರ್ಶೆ ಇದು. ಸುಮಾರು 38 ವರ್ಷಗಳ ಹಿಂದೆ.) ಅಕಸ್ಮಾತ್ತಾಗಿ ಡಿವಿಜಿ ಕನ್ನಡಿಗರ ನೆನಪಿನಿಂದ ಮರೆಯಾದರೂ ಅವರ ಮಂಕುತಿಮ್ಮ ಮಾತ್ರ ಮರೆಯಾಗಲಾರ. ಡಿವಿಜಿ ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಅವರು ಟ್ಟುಹೋದ ಸಾಹಿತ್ಯ ರಾಶಿ ಮಾತ್ರ ಇದೆ. ಅವರು ನಿಧನರಾಗಿ ಒಂಬತ್ತು ವರ್ಷಗಳ ನಂತರ (1984) ಅವರದೇ ಆದ ಕೃತಿಯೊಂದು...

ಸಾವಿನೂರಿನ ದಾರಿಯ ಅಧ್ಯಾತ್ಮ ಕೆ.ಸತ್ಯನಾರಾಯಣ ಅವರ `ಕೋವಿಡ್‌ ದಿನಚರಿ’

ಈ ಶತಮಾನ ಕಂಡಿರುವ ಅತ್ಯಂತ ಭೀಕರವಾದ ಮಾನವ ದುರಂತ ಕೊರೋನಾ ವೈರಸ್ಸಿನ ಹಾವಳಿ ಮಾಡಿರುವ ಗಾಯ ಮಾಯುವುದಕ್ಕೆ ಹಲವು ವರ್ಷಗಳೇ ಬೇಕಾಗಬಹುದು. ಸಮಾಜಜೀವಿಯಾದ ಮನುಷ್ಯ ಅನಿವಾರ್ಯವಾಗಿ ತನ್ನನ್ನೇ ತಾನು ಹೇಗೆ ಒಂದೊಂದು ದ್ವೀಪವಾಗಿ ಮಾರ್ಪಡಿಸಿಕೊಳ್ಳಬೇಕಾಗಿ ಬಂತು ಎಂಬುದು ಇದೀಗ ಬದುಕಿರುವ ಎಲ್ಲರ ಅನುಭವವೂ ಆಗಿದೆ. ಈ ಕೋವಿಡ್‌ ಆಘಾತವನ್ನು ಸೃಜನಶೀಲ ಮನಸ್ಸು ಹೇಗೆ ಪರಿಭಾವಿಸಿತು ಎಂಬುದು ಒಂದು ಕುತೂಹಲ. ಹಲವರು ಹಲವು ರೀತಿಯಲ್ಲಿ ಇದಕ್ಕೆ ಬರೆಹದ ರೂಪವನ್ನು ಕೊಟ್ಟಿದ್ದಾರೆ. ಬಹುತೇಕ ಎಲ್ಲರೂ ಮೋಡ ಕರಗಿ ನೀರಾಗಿ ಸುರಿದ...

ಆತ್ಮಚರಿತ್ರೆಯ ಮೀಮಾಂಸೆ- ಅವರವರ ಭವಕ್ಕೆ ಓದುಗರ ಭಕುತಿಗೆ

ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಕೆ.ಸತ್ಯನಾರಾಯಯಣ ಅವರು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದವರು. ಸೃಜನ ಶಕ್ತಿಯ ಜೊತೆಯಲ್ಲಿ ವಿಮರ್ಶನ ಶಕ್ತಿಯನ್ನೂ ಮೇಳೈಸಿಕೊಂಡವರು. ಅವರ ಹೊಸ ಕೃತಿ `ಅವರವರ ಭವಕ್ಕೆ ಓದುಗರ ಭಕುತಿಗೆ' ಅವರ ಸೃಷ್ಟಿಕ್ರಿಯೆಯ ಹೊಸ ಸಾಮರ್ಥ್ಯದ ಕಡೆಗೆ ಬೆರಳು ತೋರಿಸುತ್ತದೆ. ಈ ಕೃತಿಯಲ್ಲಿ ಅವರು ಕನ್ನಡದ ಏಳು ಜನ ಹೆಸರಾಂತ ಸಾಹಿತಿಗಳು ರಚಿಸಿರುವ ಆತ್ಮಚರಿತ್ರೆಗಳನ್ನು ಪರಿಶೀಲನೆಗೆ ಎತ್ತಿಕೊಂಡಿದ್ದಾರೆ. ಅದರ ಮೂಲಕ ಅವರು ಆತ್ಮಚರಿತ್ರೆ ಪ್ರಕಾರಕ್ಕೆ ಒಂದು ವ್ಯಾಖ್ಯೆಯನ್ನು ನೀಡುವ ಪ್ರಯತ್ನ ಮಾಡಿರುವುದನ್ನು ಗಮನಿಸಬಹುದು. ಈ...